ಬ್ರೇಕಿಂಗ್ ನ್ಯೂಸ್
ಸುಳ್ಯ

ಸೆ.13ರಂದು ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

ಸುಳ್ಯ : Tulu Times l ಸುಳ್ಯ ತಾಲೂಕಿನ ಬೆಳ್ಳಾರೆ ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 17ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-2026 ಆಯೋಜಿಸಲಾಗಿದೆ. ಸೆ.13ರಂದು ಮುಕ್ಕೂರು ಶಾಲಾ ವಠಾರದಲ್ಲಿ ಸ್ಪರ್ಧೆ ನಡೆಯಲಿದ್ದು, ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ.

ಚಿತ್ರಕಲಾ ಸ್ಪರ್ಧೆಯು ಬೆಳಗ್ಗೆ 10ರಿಂದ 11.30ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳ ವಯೋಮಾನ ಹಾಗೂ ತರಗತಿ ಆಧಾರದ ಮೇಲೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. 1ರಿಂದ 2ನೇ ತರಗತಿ, 3ರಿಂದ 4ನೇ ತರಗತಿ, 5ರಿಂದ 7ನೇ ತರಗತಿ ಹಾಗೂ 8ರಿಂದ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ತಮ್ಮ ವಿಭಾಗದಲ್ಲಿ ಸ್ಪರ್ಧಿಸಬಹುದು.

1ರಿಂದ 2ನೇ ತರಗತಿ, 3ರಿಂದ 4ನೇ ತರಗತಿ ಹಾಗೂ 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸಲು ವಿಷಯ ಆಯ್ಕೆ ಸ್ವಾತಂತ್ರ್ಯ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಯಾವುದೇ ವಿಷಯವನ್ನು ಆಯ್ಕೆ ಮಾಡಿಕೊಂಡು ಚಿತ್ರ ಬಿಡಿಸಬಹುದಾಗಿದೆ. ಆದರೆ 8ರಿಂದ 10ನೇ ತರಗತಿ ವಿಭಾಗದ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸಬೇಕಾದ ವಿಷಯವನ್ನು ಸ್ಪರ್ಧೆಯ ಸ್ಥಳದಲ್ಲೇ ತಿಳಿಸಲಾಗುವುದು.

Process to purchase 15,000 new buses set in motion: Transport Minister Byrathi Suresh
Credit to original source

ಸ್ಥಳದಲ್ಲೇ ನೋಂದಣಿ ;

ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು ಕಾರ್ಯಕ್ರಮದ ದಿನದಂದು ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಚಿತ್ರ ಬಿಡಿಸಲು ಅಗತ್ಯವಿರುವ ಹಾಳೆಯನ್ನು ಆಯೋಜಕರು ಒದಗಿಸಲಿದ್ದಾರೆ. ಆದರೆ ಬಣ್ಣ, ಪೆನ್ಸಿಲ್, ಬ್ರಷ್ ಸೇರಿದಂತೆ ಚಿತ್ರ ಬಿಡಿಸಲು ಅಗತ್ಯವಿರುವ ಇತರ ಪರಿಕರಗಳನ್ನು ಸ್ಪರ್ಧಿಗಳು ಸ್ವತಃ ತರಬೇಕು ಎಂದು ಆಯೋಜಕರು ತಿಳಿಸಿದ್ದಾರೆ. ಪ್ರತಿ ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರ ವಿತರಿಸಲಾಗುವುದು.

ಮೂರು ತಾಲೂಕಿನ ವಿದ್ಯಾರ್ಥಿಗಳಿಗೆ ಅವಕಾಶ

ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ಈ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಮತ್ತು ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9740189529 ಸಂಖ್ಯೆಯನ್ನು ಸಂಪರ್ಕಿಸಬಹುದು. ಗಣೇಶೋತ್ಸವದ ಅಂಗವಾಗಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸುವಂತೆ ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮನವಿ ಮಾಡಿದೆ.

Inter-taluk level drawing competition at Mukkuru on September 13 – ತುಳುಟೈಮ್ಸ್

ಇದನ್ನೂ ಓದಿ :ಪುತ್ತೂರು : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಧರ್ಮ ಶಿಕ್ಷಣ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/f6_23OBB8ws

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page