ಬ್ರೇಕಿಂಗ್ ನ್ಯೂಸ್
ಸುಳ್ಯ

ಕೆವಿಜಿ ಅಮರಜ್ಯೋತಿ : ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಸೂಚಿ, ವೃತ್ತಿ ಮಾರ್ಗದರ್ಶನ

ಸುಳ್ಯ : Tulu Times l ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಹಾಗೂ ಅಭಿರುಚಿಗೆ ಅನುಗುಣವಾಗಿ ಸೂಕ್ತ ವೃತ್ತಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ನೆರವಾಗುವ ಉದ್ದೇಶದಿಂದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು.

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಬೆಳಗ್ಗೆ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಳಿಕ ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸಲಾಯಿತು. ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಿ.ಎಲ್. ಪಾಂಡುರಂಗ, ಎಂ.ಎಸ್ಸಿ. (ಗಣಿತ), ವೃತ್ತಿ ಮಾರ್ಗದರ್ಶನ ತಜ್ಞರು, ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿ ಅವಕಾಶಗಳು, ಉನ್ನತ ಶಿಕ್ಷಣದ ಆಯ್ಕೆಗಳು ಹಾಗೂ ಭವಿಷ್ಯದ ವೃತ್ತಿ ಜೀವನದ ಕುರಿತು ಸಮಗ್ರ ಮಾಹಿತಿ ನೀಡಿದರು.

ಶಿಕ್ಷಣದ ಜತೆಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಮುಖ್ಯ ;

ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಅಭಿರುಚಿಯನ್ನು ಮೊದಲು ಗುರುತಿಸಿಕೊಂಡು ಭವಿಷ್ಯದ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಮುಖ್ಯ. ವಿವಿಧ ವೃತ್ತಿ ಕ್ಷೇತ್ರಗಳು ಹಾಗೂ ಅವಕಾಶಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋಧಾ ರಾಮಚಂದ್ರ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಬದುಕಿಗೆ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನ ಅತ್ಯಂತ ಅಗತ್ಯವಾಗಿದೆ. ತಮ್ಮ ಆಸಕ್ತಿ ಮತ್ತು ಸಾಮರ್ಥ್ಯವನ್ನು ಅರಿತುಕೊಂಡು ಸ್ಪಷ್ಟವಾದ ಗುರಿಯನ್ನು ರೂಪಿಸಿಕೊಂಡು, ಅದನ್ನು ಸಾಧಿಸಲು ನಿರಂತರ ಪ್ರಯತ್ನಿಸಬೇಕು. ಲಭ್ಯವಿರುವ ಶೈಕ್ಷಣಿಕ ಹಾಗೂ ವೃತ್ತಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

Process to purchase 15,000 new buses set in motion: Transport Minister Byrathi Suresh
Credit to original source

ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್. ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದ ಕುರಿತು ಈಗಿನಿಂದಲೇ ಸ್ಪಷ್ಟ ಗುರಿ ಹೊಂದಿ, ಅದಕ್ಕೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳಬೇಕು. ವೃತ್ತಿ ಆಯ್ಕೆಯಲ್ಲಿ ತಜ್ಞರಿಂದ ದೊರೆಯುವ ಮಾರ್ಗದರ್ಶನವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು. ವಿಜ್ಞಾನ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಣದ ನಂತರದ ವಿವಿಧ ಉನ್ನತ ಶಿಕ್ಷಣ ಹಾಗೂ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಲಾಯಿತು. ವಾಣಿಜ್ಯ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳು, ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು.
ಭೌತಶಾಸ್ತ್ರ ಉಪನ್ಯಾಸಕಿ ಭವ್ಯ ಸಿ.ಟಿ. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

KVG Amarajyothi: A Compass for Students’ Futures and Career Guidance – ತುಳು ಟೈಮ್ಸ್

ಇದನ್ನೂ ಓದಿ : ರಂಗಮನೆಯ 25ನೇ ವರ್ಷಾಚರಣೆ: ಆ.29ರಂದು ‘ಭೀಷ್ಮ ವಿಜಯ’ ಯಕ್ಷಗಾನ ತಾಳಮದ್ದಳೆ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/VGtGLd89u0o?si=UUK1A1gXSRX_V2bm

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page