ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಪುತ್ತೂರು

Puttur: ಯಕ್ಷಗಾನ ಕಲಾವಿದರು ಸಲಿಂಗಕಾಮಿಗಳು ಎಂಬ ಹೇಳಿಕೆಗೆ ವಿಜಯೇಂದ್ರ ಆಕ್ರೋಶ!

Puttur: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ರಾವಳಿ ಭಾಗದ ಯಕ್ಷಗಾನ ಕಲಾವಿದರು ಸಲಿಂಗಕಾಮಿಗಳು ಎಂಬ ಉದ್ಧಟತನದ ಹೇಳಿಕೆಯನ್ನು ನೀಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿ ಸಂದರ್ಭದಲ್ಲಿ ಇಂದು ಅಭೂತಪೂರ್ವ ಕಾರ್ಯಕ್ರಮ ಇಲ್ಲಿ ಆಯೋಜಿಸಲಾಗಿದೆ ಎಂದರು. ರಾಜ್ಯದ ರೈತರು, ಕಬ್ಬು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲವೆಂದು ಆಕ್ಷೇಪಿಸಿ ಮೆಕ್ಕೆ ಜೋಳ ಬೆಳೆಗಾರರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದರ ನಡುವೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ. ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧರಿಸಿದೆ.  ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಅಧಿವೇಶನದಲ್ಲಿ ಮತ್ತು ಹೊರಗಡೆ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಪ್ರಕಟಿಸಿದರು. ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟದವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ; ಕಾಂಗ್ರೆಸ್ಸಿನ ಭರವಸೆ ನಂಬಿ ಮೋಸಹೋದ ಭಾವನೆ ಮತದಾರರಲ್ಲಿದೆ ಎಂದು ವಿವರಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಜಾಕ್ಕೆ ಆಗ್ರಹ!

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಒಂದು ಹೇಳಿಕೆ ನೀಡಿದ್ದಾರೆ. ಕರಾವಳಿ ಭಾಗದ ಯಕ್ಷಗಾನ ಕಲಾವಿದರು ಸಲಿಂಗಕಾಮಿಗಳು ಎಂಬ ಉದ್ಧಟತನದ ಹೇಳಿಕೆಯನ್ನು ನೀಡಿದ್ದಾರೆ ಎಂದು ವಿಜಯೇಂದ್ರ ಅವರು ಖಂಡಿಸಿದರು. ಅವರ ಹೇಳಿಕೆ ಯಕ್ಷಗಾನ ಕಲಾವಿದರು, ಕರಾವಳಿ ಭಾಗಕ್ಕೆ ಮಾತ್ರವಲ್ಲದೇ ಇಡೀ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ ಎಂದು ಆಕ್ಷೇಪಿಸಿದರು. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿ, ಸರಕಾರಕ್ಕೆ ಇಲ್ಲಿನ ಕಲೆ, ಪರಂಪರೆ, ಸಂಸ್ಕøತಿ ಬಗ್ಗೆ ಕಿಂಚಿತ್ತಾದರೂ ತಕ್ಷಣ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಕಿತ್ತು ಬಿಸಾಕಬೇಕೆಂದು ಒತ್ತಾಯಿಸಿದರು. ಬಿಜೆಪಿ ಮಾತ್ರವಲ್ಲ; ಇಡೀ ಹಿಂದೂ ಸಮಾಜ ಇದನ್ನು ಖಂಡಿಸಬೇಕಿದೆ. ಪಕ್ಷಾತೀತವಾಗಿ ಇದರ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ಧ ಹಿಂದಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭ್ರಷ್ಟಾಚಾರದ ಕುರಿತು ಆಧಾರಸಹಿತ ಆರೋಪ ಮಾಡಿದ್ದಾರೆ. ಆ ಸ್ಥಾನದ ಗೌರವ ಉಳಿಸಲು ಅವರೇ ರಾಜೀನಾಮೆ ಕೊಟ್ಟರೆ ಒಳ್ಳೆಯದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 196

You cannot copy content of this page