ಬ್ರೇಕಿಂಗ್ ನ್ಯೂಸ್
ಕರಾವಳಿಮಂಗಳೂರು

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ – ಮೂವರ ಬಂಧನ

Mangaluru: ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 6.24 ಲಕ್ಷ ರೂ. ವಂಚಿಸಿದ್ದ ಪ್ರಕರಣ ನಡೆದಿದೆ. ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾವೂರಿನ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಅಸಲಿ ಚಿನ್ನಾಭರಣಗಳೆಂದು ನಂಬಿಸಿ ಅಡವಿಟ್ಟು ಸಾಲ ಪಡೆದಿದ್ದರು.

ಆಕಾಶಭವನದ ಆನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಪುತ್ತೂರು ತಾಲೂಕು ಬೆಳಂದೂರು ಗ್ರಾಮದ ನಿವಾಸಿ ಅಬ್ದುಲ್ ರಮೀಝ್ (33) ಬಂಧಿತ ಆರೋಪಿಗಳು.

tulutime ಯುಟ್ಯೂಬ್‌ ಚಾನೆಲ್‌ ವೀಕ್ಷಿಸಿ: www.youtube.com/@tulutimess

ಇದನ್ನೂ ಓದಿ: Puttur: ಇಬ್ಬರು ಸಹೋದ್ಯೋಗಿ ಯುವತಿಯರು ನಾಪತ್ತೆ – ದೂರು ದಾಖಲು

ಪ್ರಕರಣದ ವಿವರ:
ಅಕ್ಟೋಬರ್ 9 ರಂದು ಹಾರೀಫ್ ಅಬೂಬಕ್ಕರ್ ಕಾವೂರು ಬಳಿಯ ವಿವಿದೋದ್ದೇಶ ಸಹಕಾರ ಸಂಘದಲ್ಲಿ ನಕಲಿ ಚಿನ್ನಾಭರಣವನ್ನು ಅಡವಿಟ್ಟು 6.24 ಲಕ್ಷ ರೂ. ಸಾಲ ಪಡೆದಿದ್ದ. ಆದರೆ, ನಂತರ ಅಡವಿಟ್ಟ ಚಿನ್ನಾಭರಣದ ಬಗ್ಗೆ ಅನುಮಾನ ಬಂದ ಹಿನ್ನೆಲೆ ಅವುಗಳನ್ನು ಪರಿಶೀಲಿಸಿದಾಗ ನಕಲಿ ಎಂದು ದೃಢಪಟ್ಟಿವೆ. ಈ ಬಗ್ಗೆ ಸಹಕಾರಿ ಸಂಘವು ನೀಡಿದ ದೂರಿನನ್ವಯ ಕಾವೂರು ಪೊಲೀಸರು ತನಿಖೆ ಕೈಗೊಂಡು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ಆರೋಪಿಗಳಿಂದ 5 ಲಕ್ಷ ರೂ. ನಗದು, ಸುಮಾರು 45 ಗ್ರಾಂ ತೂಕದ ನಕಲಿ ಚಿನ್ನಾಭರಣಗಳು, ಅಂದಾಜು 20 ಲಕ್ಷ ರೂ. ಮೌಲ್ಯದ ಒಂದು ಕಾರು ಮತ್ತು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಸುಮಾರು 26.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಕಾವೂರು ಠಾಣಾ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪಿಎಸ್‌ಐ ಮಲ್ಲಿಕಾರ್ಜುನ್ ಬಿರಾದಾರ, ಎಎಸ್‌ಐ ಚಂದ್ರಪ್ಪ ಸುನೀಲ್, ಮತ್ತು ಹೆಡ್ ಕಾನ್‌ಸ್ಟೆಬಲ್‌ಗಳಾದ ಸಂಬಾಜಿ ಕದಂ, ಕೆಂಚನ್ ಗೌಡ, ಪ್ರಮೋದ್ ಕುಮಾರ್, ಕಾನ್‌ಸ್ಟೆಬಲ್‌ಗಳಾದ ನಾಗರಾಜ್ ಬೈರಗೊಂಡ, ಪ್ರವೀಣ್, ರಿಯಾಝ್, ತೀರ್ಥಪ್ರಸಾದ್ ಮತ್ತು ಆನಂದ್ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಭಾರತೀಯ ನ್ಯಾಯ ಸಂಹಿತೆ, 2023 ರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page