ಬ್ರೇಕಿಂಗ್ ನ್ಯೂಸ್
ಕರಾವಳಿಮಂಗಳೂರು

ಮಂಗಳೂರು: ಮದ್ಯ ಸೇವನೆ ಹಣ ನೀಡದಕ್ಕೆ ಜಗಳ – ಕೊಲೆಯಲ್ಲಿ ಅಂತ್ಯ

ಮಂಗಳೂರು – ತುಳು ಟೈಮ್ಸ್‌: ಮದ್ಯ ಸೇವಿಸೋದಕ್ಕೆ ಹಣ ಕೊಡುವ ವಿಚಾರಕ್ಕೆ ಯುವಕನನ್ನು ಕೊಲೆಗೈದ ದಾರುಣ ಘಟನೆ ನಡೆದಿದೆ. ಡಿ. 7ರ ಭಾನುವಾರದಂದು ಬೈಕಂಪಾಡಿಯಲ್ಲಿ ಈ ಘಟನೆ ನಡೆದಿದೆ.

ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬೈಕಂಪಾಡಿಯಲ್ಲಿ ವಾಸವಿರುವ ಸಚಿನ್ ಕುಮಾರ್ ಕೊಲೆಯಾದ ಯುವಕ.

ಇದನ್ನೂ ಓದಿ: ಮಂಗಳೂರು: ಮಾದಕ ವಸ್ತು ಮಾರಾಟ – ಮೂವರ ಬಂಧನ

ಮೂಲತಃ ಬೆಳಗಾವಿ ಜಿಲ್ಲೆ, ಸದ್ಯ ಬೈಕಂಪಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರವೀಣ್ ಶಿವಶಂಕರಪ್ಪ ಕೊಲೆ ಆರೋಪಿ ಎಂದು ತಿಳಿದು ಬಂದಿದೆ. ಸಚಿನ್ ಕುಮಾರ್ ಮತ್ತು ಪ್ರವೀಣ್ ಶಿವಶಂಕರಪ್ಪ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

A young man was stabbed to death after arguing with someone who had not paid for alcohol. The murdered youth is Sachin Kumar, a resident of Uttar Pradesh and currently residing in Baikampady. – Tulu Times


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ  : https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page