ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು?: ಶೋಭಾ ಕರಂದ್ಲಾಜೆ

ಬೆಂಗಳೂರು: Tulu Times | ಕೇರಳದ ಚುನಾವಣೆಯ ಕಾವು ಕರ್ನಾಟಕದಲ್ಲಿ ಏನು ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಹೊರದೇಶಗಳಿಂದ ಅಕ್ರಮ ವಲಸೆ ಬರುತ್ತಿರುವವರ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಡ್ರಗ್ ಮಾಫಿಯ ನಿರತ ಅಕ್ರಮ ವಲಸಿಗರ ವಿರುದ್ಧ ಎಲ್ಲ ಇಲಾಖೆಗಳು ಸೇರಿ ಕ್ರಮ ಕೈಗೊಳ್ಳಲಿ ಎಂದು ವಿನಂತಿಸಿದರು. ರಾಜ್ಯ ಸರಕಾರವೂ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿ ಹೊರಹಾಕಲು ಸಹಕರಿಸಬೇಕಿದೆ ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಯಾರ ಸರಕಾರ ನಡೆಯುತ್ತಿದೆ. ಯಾರಿಗಾಗಿ ಸರಕಾರ ನಡೆಯುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದ ಮೂಗುದಾರ ಎಲ್ಲಿದೆ? ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕದ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ಟ್ವೀಟ್ ಮಾಡಿ ಸರಕಾರ ಹೇಗೆ ನಡೆಸಬೇಕೆಂದು ಕಿವಿಮಾತು ಹೇಳಿದ್ದಾರೆ. ಅವರದೇ ರಾಜ್ಯದ ಪಿಣರಾಯಿ ವಿಜಯನ್ ಕರ್ನಾಟಕದಲ್ಲಿ ಏನು ಮಾಡಬೇಕು, ಏನು ಮಾಡಬಾರದೆಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶಿವಕುಮಾರರಿಗೆ ಸರಕಾರ ನಡೆಸಲು ಸಾಂವಿಧಾನಿಕ ಹಕ್ಕು, ಶಕ್ತಿ ಇದೆಯೇ ಇಲ್ಲವೇ? ಎಂದು ಕೇಳಿದರು. ಕೋಗಿಲು ಅಕ್ರಮ ವಲಸಿಗರನ್ನು ನೋಟಿಸ್ ಕೊಟ್ಟು 167 ಮನೆಗಳನ್ನು ತೆರವುಗೊಳಿಸಿದ್ದು ಒಳ್ಳೆಯ ಕೆಲಸ. ತೆರವನ್ನು ಕೆ.ಸಿ.ವೇಣುಗೋಪಾಲ್ ಪ್ರಶ್ನಿಸಿದ್ದಾರೆ. ಪಿಣರಾಯಿ ವಿಜಯನ್ ಒತ್ತಡ ತರುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಈ ವಲಸಿಗರು ಯಾರು? ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಅಲ್ಲಿದ್ದವರೆಲ್ಲ ಪಶ್ಚಿಮ ಬಂಗಾಲದಿಂದ ಬಂದವರು. ಅಲ್ಲಿಯೂ ಸಮರ್ಪಕ ವಿಳಾಸ ಇಲ್ಲದವರು. ಹೆಬ್ಬಾಳದ ಅಮೀನ್‍ಕೆರೆಯಲ್ಲಿ ವಾಸ ಮಾಡುವವರು, ಅಕ್ರಮ ಚಟುವಟಿಕೆ ಮಾಡುವವರು ಯಾರೆಂದು ಪೊಲೀಸ್ ಕಮೀಷನರ್‍ಗೆ ಪತ್ರ ಬರೆದಿದ್ದೇನೆ. ಕ್ರಮ ಕೈಗೊಳ್ಳಲು ಹೇಳಿದ್ದೆ. ಅದೇರೀತಿಯ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದವರನ್ನು ಕೋಗಿಲುವಿನಲ್ಲಿ ತೆರವು ಮಾಡಿದ್ದಾರೆ ಎಂದು ವಿವರಿಸಿದರು.

ದೆಹಲಿ ಒತ್ತಡಕ್ಕೆ ಮಣಿದ ಸಿಎಂ, ಡಿಸಿಎಂ

ಬೆಂಗಳೂರಿನ ವಾಸಿಂ ಬಡಾವಣೆ, ಫಕೀರ್ ಬಡಾವಣೆಯಲ್ಲಿ ಯಾರಿದ್ದಾರೆ? ದೆಹಲಿ ಒತ್ತಡಕ್ಕೆ ಮಣಿದು ಸಿಎಂ, ಡಿಸಿಎಂ ಸಭೆ ನಡೆಸುತ್ತಾರೆ. ಬಹಳ ದಿನದಿಂದ ಅವರು ಒಟ್ಟಾಗಿಲ್ಲ; ಕುರ್ಚಿ ಉಳಿಸಿಕೊಳ್ಳಲು ಒಬ್ಬರು, ಕುರ್ಚಿಯನ್ನು ಪಡೆಯಲು ಒಬ್ಬರು ಸ್ಪರ್ಧೆಯ ಮೇಲೆ ದೆಹಲಿ ಹೈಕಮಾಂಡನ್ನು ಸಂತುಷ್ಟಗೊಳಿಸಲು ಒಟ್ಟಿಗೆ ಸಭೆ ನಡೆಸಿ ತೆರವುಗೊಳಿಸಿ ಅಕ್ರಮ ವಲಸಿಗರಿಗೆ ಬೈಯಪ್ಪನಹಳ್ಳಿಯಲ್ಲಿ ಮನೆ ಕೊಡಲು ನಿರ್ಧರಿಸಿದ್ದಾರೆ. ಯಾರವರು? ಯಾವಾಗ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ಹಲವೆಡೆ, ಸರಕಾರಿ ಭೂಮಿಗಳಲ್ಲಿ ಇರುವ ಅಕ್ರಮ ವಲಸಿಗರ ಪಟ್ಟಿ ಯಾವಾಗ ತಯಾರು ಮಾಡುತ್ತೀರಿ ಎಂದು ಪ್ರಶ್ನಿಸಿದರು. ಅಮೀನ್‍ಕೆರೆ ಒಂದು ಸ್ಯಾಂಪಲ್ ಅಷ್ಟೇ. ಅಕ್ರಮ ವಲಸಿಗರಿಗೆ, ರೋಹಿಂಗ್ಯಾಗಳಿಗೆ ಸರಕಾರಿ ಮನೆ ಕೊಟ್ಟರೆ ಬೆಂಗಳೂರು ಏನಾದೀತು ಎಂದು ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ಸರಕಾರ, ಪೊಲೀಸರು ಅಕ್ರಮ ವಲಸಿಗರ ಗುರುತಿಸುವಿಕೆ ವಿಚಾರದಲ್ಲಿ ಸಹಕಾರ ಕೊಡದೇ ಇದ್ದರೆ ಇವರನ್ನು ಪತ್ತೆ ಮಾಡುವುದು ಹೇಗೆ ಎಂದು ಕೇಳಿದರು.

What is the status of those who applied for housing in Karnataka?: Shobha Karandlaje- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 125

You cannot copy content of this page