ಬ್ರೇಕಿಂಗ್ ನ್ಯೂಸ್
ಕಡಬಕರ್ನಾಟಕ

ಕಡಬದ ಯುವತಿ ತನ್ನ ಮಗುವಿನೊಂದಿಗೆ ನಾಪತ್ತೆ!

ಕಡಬ: Tulu Times | ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್ (3.5) ನೊಂದಿಗೆ ಮಹಿಳೆ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.

ಮೂರು ತಿಂಗಳ ಹಿಂದೆ ನೇಹಾ ತನ್ನ ಗಂಡನೊಂದಿಗೆ ಕೆಲಸಕ್ಕೆಂದು ಬೆಂಗಳೂರಿಗೆ ಹೋಗಿದ್ದರು. ನಂತರ ಗಂಡ ಡಿಸೆಂಬರ್ 25 ರಂದು ಗಂಡ ಊರಿಗೆ ಬಂದಿದ್ದ ಎನ್ನಲಾಗಿದೆ.  ಈ ವೇಳೆ ನೇಹಾ ತನ್ನ ಮಗುವಿನೊಂದಿಗೆ ಮನೆಗೂ ಬಾರದೇ, ದೂರವಾಣಿ ಕರೆಗೂ ಸಿಗದೇ ಕಾಣೆಯಾಗಿದ್ದಾರೆ. ಈ ಬಗೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ: ಅಸಹಜ ಸಾವು ಪ್ರಕರಣ ಹೈಕೋರ್ಟ್ ನಲ್ಲಿ ವಿಚಾರಣೆ

ನೇಹಾ ನೋಡಲು ಹೇಗಿದ್ದಾರೆ..? 

ನೇಹಾ  ಎತ್ತರ 152 ಸೆಂ ಮೀ, ಗೋಧಿ ಮೈ ಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಚೂಡಿದಾರ ಧರಿಸಿರುತ್ತಾರೆ. ಕನ್ನಡ, ಉರ್ದು, ಬ್ಯಾರಿ ಭಾಷೆ ಮಾತನಾಡುತ್ತಾರೆ. ನಿಹಾಲ್: 3.5 ವರ್ಷ, ಸಪೂರ ಶರೀರ, ಕಾಣೆಯಾದವರ ಬಗ್ಗೆ, ಮಾಹಿತಿ ಪತ್ತೆಯಾದಲ್ಲಿ ಕಡಬ ಪೊಲೀಸ್ ಠಾಣೆ  ಸಂಪರ್ಕ ಮಾಡಬೇಕು ಎಂದು  ಪೋಲಿಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುವ ಭಕ್ತರಿಗೆ ಇದು ಜೀವನದ ಅಮೂಲ್ಯ ಆಧ್ಯಾತ್ಮಿಕ ಅನುಭವ

ಉಳ್ಳಾಲದ ಅಯ್ಯಪ್ಪ ಮಾಲಾಧಾರಿ ಹೃದಯಾಘಾತಕ್ಕೆ ಬಲಿ

ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ, ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉಳ್ಳಾಲದ ಅಯ್ಯಪ್ಪ ಮಾಲಾಧಾರಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ

ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಶನಿವಾರದಂದು ನಗರದ ಅರ್ಕುಳ, ತುಪ್ಪೆಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಇನ್ನು ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಮರಣೋತ್ತರ ಪರೀಕ್ಷೆಯನ್ನು ಬೇಗ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ನಂತರ ಪಾರ್ಥಿವ ಶರೀರವು ಉಳ್ಳಾಲ ತಲುಪಲಿದೆ. ಮೃತ ಚಂದ್ರಹಾಸ್ ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಮೂಲತ: ಬಾಕ್ರಬೈಲ್ ನಿವಾಸಿಯಾದ ಚಂದ್ರಹಾಸ್, ಕಳೆದ ಹತ್ತು ವರುಷದ ಹಿಂದೆ ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಮೃತರು ಪತ್ನಿ, ಪುತ್ರಿ ಪುತ್ರನನ್ನು ಆಗಲಿದ್ದಾರೆ.

A young woman from Kadaba goes missing with her child!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page