ಕಡಬ:Tulu Times | ಬೈಕ್ ಸವಾರನಿಗೆ ಕಾಡಾನೆ ಎದುರಾಗಿ, ಯುವಕ ಬೈಕ್ ಬಿಟ್ಟು ಪರಾರಿಯಾದ ಘಟನೆ ನಡೆದಿದೆ.
ಕೊಂಬಾರು ಕೊಲೆ ಮಿತ್ತಬೈಲು ರಸ್ತೆಯಲ್ಲಿ ಕಾಡಾನೆ ಎದುರಾಗಿದೆ. ಕೂದಲೆಳೆಯ ಅಂತರದಲ್ಲಿ ವಿನಯ್ ಅಗರಿ ಎಂಬವರು ಆನೆಯಿಂದ ಪಾರಾಗಿದ್ದಾರೆ. ಗ್ರಾಮದ ಜನ ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಯ ವಿರುದ್ಧ ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಬೇಕಾದ ಸ್ಥಿತಿ ಎದುರಾದೀತು,” ಎಂದು ಸ್ಥಳೀಯ ನಿವಾಸಿಗಳು ಒಕ್ಕೊರಲಿನಿಂದ ಆಗ್ರಹಿಸಿ, ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೇವಲ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರೆ ಸಾಲದು, ಕಾಡಾನೆಗಳ. ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದರು. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪರಿಗೆ ಸುನಿಲ್ ಕುಮಾರ್ ರನ್ನು ಹೋಲಿಸುತ್ತಿರುವುದೇಕೆ?
ಕುಂದಾಪುರದಲ್ಲಿ 15 ವರ್ಷದ ವಿದ್ಯಾರ್ಥಿನಿ ಶಾಲೆಗೆ ಹೋದವಳು ನಾಪತ್ತೆ!
ಕುಂದಾಪುರ: ಕುಂದಾಪುರ ತಾಲೂಕು ಹೆಸ್ಕುತ್ತೂರು ಗ್ರಾಮದ 15 ವರ್ಷದ ಚೈತ್ರಾ ಎಂಬ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಪ್ರಕರಣ ಕಂಡುಬಂದಿದೆ.
9 ನೇ ತರಗತಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆಯಾ ಹುಡುಗಿ, ಮಧ್ಯಾಹ್ನ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಶಾಲೆಗೂ ಹೋಗದೆ ವಾಪಸು ಮನೆಗೂ ಬಾರದೇ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಈಕೆ ಯಾರಿಗಾದರೂ ಕಾಣ ಸಿಕ್ಕರೆ ಕುಂದಾಪುರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 9480805468, 08254237100 ಗೆ ಮಾಹಿತಿ ನೀಡಲು ತಿಳಿಸಲಾಗಿದೆ.
ಇದನ್ನೂ ಓದಿ: ಹೆಚ್ಚು ಕುಂಬಳಕಾಯಿ ಬೀಜ ಸೇವನೆ ಆರೋಗ್ಯಕ್ಕೆ ಹಾನಿಕಾರಕ: ತಜ್ಞರ ಎಚ್ಚರಿಕೆ
ನೆಲ್ಯಾಡಿ: ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಭೀಕರ ಸಾವು
ನೆಲ್ಯಾಡಿ: ಪ್ರತ್ಯೇಕ ಪ್ರಕರಣದಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕ ನೆಲ್ಯಾಡಿ ಲಾವತ್ತಡ್ಕ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಜ. 23 ಮಧ್ಯಾಹ್ನ ವೇಗವಾಗಿ ಬಂದ ಬೈಕ್ ಲಾವತ್ತಡ್ಕ ಸಮೀಪ ಸ್ಕಿಡ್ ಆಗಿದೆ. ಅಪಘಾತದ ತೀವ್ರತೆಗೆ ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ಜಾಯ್ (51) ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
A wild elephant attacked a bike in Kadaba.. A young man escaped from the elephant attack.- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











