ಮಂಗಳೂರು : Tulu Times l ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ ‘ಹಾಟ್ ಸೀಟ್’ ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ ಕಮಲ ಅರಳಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ತುಳು ಕನ್ನಡ ಮಾತನಾಡುವ ಜನರೇ ಅಧಿಕವಾಗಿರುವ ಎಣ್ಮಕಜೆ ವ್ಯಾಪ್ತಿಯ ಕಂಡೇರಿ ಗ್ರಾಮ ಪಂಚಾಯತ್ ನಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ ಸುರೇಂದ್ರನ್ ರವರ ಪರವಾಗಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಇವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ ಡಿಎಫ್ ಹಾಗೂ ಯುಡಿಎಫ್ ನ ಆಡಳಿತ ವೈಫಲ್ಯ ಹಾಗೂ ಕಾಸರಗೋಡಿನ ಜ್ವಲಂತ ಸಮಸ್ಯೆಗಳಿಂದ ಬೇಸತ್ತಿರುವ ಜೊತೆಗೆ ನವ ಕಾಸರಗೋಡಿನ ನಿರ್ಮಾಣಕ್ಕಾಗಿ ಕಾಸರಗೋಡಿನ ಜನತೆ ಬದಲಾವಣೆಯನ್ನು ಬಯಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪದ್ಮನಾಭ ಭಟ್ ಕಂಡೇರಿ, ಪ್ರದೀಪ್ ಭಟ್ ಕಂಡೇರಿ, ಸಾತ್ವಿಕ್ ಕಂಡೇರಿ, ನಾಲ್ಕನೇ ವಾರ್ಡ್ ನ ಪಂಚಾಯತ್ ಸದಸ್ಯರಾದ ಪುಷ್ಪಾವತಿ ವಿ ರೈ, ಪಕ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸ್ವಸ್ತಿಕ್ ಕೆಂಗಣಾಜೆ , ಪ್ರಜ್ವಲ್ ಆರ್ ಕೆ ದಂಬೆಕಾನ, ವಿನೋದ್ ಕೊಲ್ಯ, ಪ್ರಶಾಂತ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Kerala’s Manjeshwara assembly constituency: BJP candidate goes door to door to solicit votes – ತುಳುಟೈಮ್ಸ್
ಇದನ್ನೂ ಓದಿ :ಶಿಶು ಆಹಾರದಲ್ಲಿ ಮೊಸರು: 6 ತಿಂಗಳ ನಂತರ ಸುರಕ್ಷಿತವೇ? ತಜ್ಞರ ಸ್ಪಷ್ಟನೆ
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/p4-vd_M93Z8?si=DKM3cy-OIKlRuRRj











