ಬ್ರೇಕಿಂಗ್ ನ್ಯೂಸ್
ರಾಜಕೀಯ

‘ಕಾಕ್‌ರೋಚ್ ಜನತಾ ಪಾರ್ಟಿ’ ಪ್ರತಿಭಟನೆ: ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ

ನವದೆಹಲಿ: Tulu Times l ನೀಟ್ ಮತ್ತು ಸಿಬಿಎಸ್‌ಇ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಶನಿವಾರ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ಪ್ರತಿಭಟನಾಕಾರರು ಸೇರಿದ್ದರು.

ಸಿಜೆಪಿ ಸಂಸ್ಥಾಪಕ ಅಭಿಷೇಕ್ ದಿಪ್ಕೆ ಮಾತನಾಡಿ, ಇಂದು (ಜೂ.06) ಸಂಜೆ 5 ಗಂಟೆಯೊಳಗೆ ಶಿಕ್ಷಣ ಸಚಿವರು ರಾಜೀನಾಮೆ ನೀಡದಿದ್ದರೆ ದೇಶದಾದ್ಯಂತ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಮುಂದಿನ ವಾರ ವಿವಿಧ ನಗರಗಳಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಮುಂದಿನ ಶನಿವಾರ ಮತ್ತೊಮ್ಮೆ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಘೋಷಿಸಿದರು.

ಈ ಸಂಘಟನೆ ಒಂದು ವ್ಯಂಗ್ಯಾತ್ಮಕ ಆನ್‌ಲೈನ್ ಚಳವಳಿಯಾಗಿ ಆರಂಭವಾಯಿತು. ನ್ಯಾಯಾಂಗ ವಿಚಾರಣೆಯ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಅವರು ನಕಲಿ ಕಾನೂನು ಪದವಿಗಳೊಂದಿಗೆ ನಿರುದ್ಯೋಗಿಗಳಾಗಿರುವ ಕೆಲ ಯುವಕರನ್ನು ಕಾಕ್‌ರೋಚ್‌ಗಳಿಗೆ ಹೋಲಿಸಿದರೆಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಬಳಿಕ ಅದೇ ವಿಚಾರವನ್ನು ಆಧರಿಸಿ ಈ ಚಳವಳಿ ರೂಪುಗೊಂಡಿತು. ಈ ಚಳವಳಿಗೆ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಎನ್‌ಸಿಪಿ (ಎಸ್‌ಪಿ) ನಾಯಕ ರೋಹಿತ್ ಪಾವರ್ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ನೀಟ್ ಮತ್ತು ಸಿಬಿಎಸ್‌ಇ ಪರೀಕ್ಷೆಗಳಲ್ಲಿನ ಅಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಕೆಲವು ನೀತಿಗಳು ಯುವಜನರ ಮೇಲೆ ನೇರ ಪರಿಣಾಮ ಬೀರಿವೆ. ಪ್ರತಿಭಟನೆಯಲ್ಲಿ ಯುವಕರ ಅಭೂತಪೂರ್ವ ಭಾಗವಹಿಸುವಿಕೆ ಅವರ ಅಸಮಾಧಾನವನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಂತರ್ ಮಂತರ್ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರತಿಭಟನೆ ಶಾಂತಿಯುತವಾಗಿ ನಡೆಯಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ.

‘Cockroach Janata Party’ protests: Demand for Education Minister’s resignation – ತುಳು ಟೈಮ್ಸ್

ಇದನ್ನೂ ಓದಿ : ಸಂಖ್ಯಾಶಾಸ್ತ್ರಕ್ಕೂ, ಮೊಬೈಲ್‌ನಲ್ಲಿ ತೋರಿಸೋ ಪುನರಾವರ್ತಿತ ಸಂಖ್ಯೆಗೂ ಸಂಬಂಧವಿದೆಯೇ?

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/live/xI868u7lWtY?si=i372iy4gg17ZzHtB

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 18

You cannot copy content of this page