Mangaluru: ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ನಗರದ ನಂತೂರು ಬಳಿ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ತಕ್ಷಣವೇ ಸ್ಥಳೀಯರು ಕಾರಿನ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಕೆಲ ಕಾಲ ದಟ್ಟ ಹೊಗೆ ಬಂದಿದೆ. ಬಳಿಕ ಪಾಲಿಕೆ ನೀರು ಸರಬರಾಜು ಟ್ಯಾಂಕರ್ ಸ್ಥಳಕ್ಕೆ ಆಗಮಿಸಿದ್ದು. ಟ್ಯಾಂಕರ್ ಸಿಬ್ಬಂದಿ ನೀರು ಹಾಯಿಸಿ ಕಾರಿನಲ್ಲಿ ಉಂಟಾದ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಏನು ಕಾರಣ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಇದನ್ನೂ ಓದಿ: Agriculture : ಬಾಳೆಕೃಷಿಗೂ ಪೆಟ್ಟಾಯಿತು ಕುಸಿದ ಬಾಳೆ ದರ…!
=================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











