ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Puttur: ಟ್ರಾಫಿಕ್‌ ಪೊಲೀಸರ ದುರ್ವರ್ತನೆ – ಇಬ್ಬರು ಅಮಾನತು

Puttur: ಆಟೋ ಚಾಲಕನ ಮೇಲೆ ಅವಾಚ್ಯ ಶಬ್ದ ಬಳಕೆ, ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ, ಸಂಚಾರ ಪೊಲೀಸ್ ಇಲಾಖೆಯು ಎಎಸ್ಐ ಚಿದಾನಂದ ರೈ ಮತ್ತು ಸಿಪಿಸಿ 2283 ಶೈಲ ಎಂಕೆ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ದೃಢಪಡಿಸಿದೆ.

ಈ ಘಟನೆ ಅ. 17 ರ ಶುಕ್ರವಾರ ಸಂಜೆ ಮಾಣಿ-ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯ ದರ್ಬೆ ಬಳಿ ನಡೆದಿದೆ. ವೈರಲ್ ಆಗಿರುವ ದೃಶ್ಯಗಳಲ್ಲಿ, ಅಧಿಕಾರಿಗಳು ಆಟೋವನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳನ್ನು ಬಳಸಿ, ಚಾಲಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು.

ಇಲಾಖೆಯ ಹೇಳಿಕೆಯ ಪ್ರಕಾರ, ಕುರಿಯ ಗ್ರಾಮದ ನಿವಾಸಿ ಬಶೀರ್ ಎಂದು ಗುರುತಿಸಲಾದ ಚಾಲಕ ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್‌ ಅಧಿಕಾರಿಗಳು ಕೈ ಸನ್ನೆ ಮೂಲಕ ನಿಲ್ಲಿಸುವಂತೆ ಸೂಚಿಸಿದ್ದಾರೆ.

ಆದರೆ ಚಾಲಕ ವೇಗವಾಗಿ ಓಡಿಸಿ, ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಕುರಿತು ಆತನನ್ನು ಹಿಂಬಾಲಿಸಿ ವಾಹನ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲಾಗಿದೆ. ವೀಡಿಯೊದಲ್ಲಿ ಸೆರೆಹಿಡಿಯಲಾದ ಅಸಭ್ಯ ಭಾಷೆ, ದೈಹಿಕ ಹಲ್ಲೆ ಸೇರಿದಂತೆ ಆಕ್ರಮಣಕಾರಿ ನಡವಳಿಕೆಯನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಸೂಕ್ತ ಕ್ರಮಕೈಗೊಂಡಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಚಾಲಕ ಮಾಧ್ಯಮಗಳಿಗೆ ತಿಳಿಸಿದ್ದು, ದರ್ಬೆಯ ಬೈಪಾಸ್ ರಸ್ತೆಯ ಬಳಿ ತನ್ನ ಆಟೋವನ್ನು ನಿಲ್ಲಿಸಿ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಅಧಿಕಾರಿಗಳು ಅವನ ಬಳಿಗೆ ಬಂದು ಅವನ ವಾಹನದ ಮುಂದೆ ಬೈಕನ್ನು ನಿಲ್ಲಿಸಿದರು.

ನಂತರ ಅವನು ರಸ್ತೆ ವಿಭಜಕವನ್ನು ದಾಟಿ ಅಶ್ವಿನಿ ವೃತ್ತದ ಕಡೆಗೆ ಹೋದನು. ಅಧಿಕಾರಿಗಳು ಅವನನ್ನು ಹಿಂಬಾಲಿಸಿ ಕಾಲೇಜಿನ ಬಳಿ ತಡೆದು, ಅಲ್ಲಿ ಅವರು ಪ್ರಚೋದನೆಯಿಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವೈಯಕ್ತಿಕ ದ್ವೇಷ: ಖಾಸಗಿ ವಿಡಿಯೋ ವೈರಲ್‌ ಮಾಡಿದ ಕಾಂಗ್ರೆಸ್‌ ಮುಖಂಡ – ತಂದೆಯಿಂದ ದೂರು


 

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page