ಬ್ರೇಕಿಂಗ್ ನ್ಯೂಸ್
ಕರ್ನಾಟಕಪುತ್ತೂರು

ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ₹7 ಲಕ್ಷದ ಬೆಳ್ಳಿ ಛತ್ರಿ ಕೊಡುಗೆ

ಪುತ್ತೂರು: Tulu Times | ಪುತ್ತೂರಿನ  ಪಡುಮಲೆ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಳಕ್ಕೆ ಕೇಶವ ಭಟ್ ಕೆ.ಕೂವೆತೋಟ ಮತ್ತು ಕೆ.ಶಾಂತಕುಮಾರಿ ದಂಪತಿಗಳು ಮಹಾಲಿಂಗೇಶ್ವರ ದೇವಾಲಯಕ್ಕೆ  ₹7 ಲಕ್ಷದ ಬೆಳ್ಳಿ ಛತ್ರಿ ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: ಇಂದಿನ ರಾಶಿಭವಿಷ್ಯ : ಫೆಬ್ರವರಿ 15, 2026

ಮಹಾಲಿಂಗೇಶ್ವರ ದೇವಳಕ್ಕೆ 2.640 ಕೆ.ಜಿ.ಯ, ₹ 7ಲಕ್ಷ ಮೌಲ್ಯದ ಬೆಳ್ಳಿ ಕೊಡೆಯನ್ನು  ನೀಡಿದ್ದಾರೆ.  ಕೂವೆತೋಟ ಮನೆತನದ ಕೇಶವ ಭಟ್ ಕೆ.ಕೂವೆತೋಟ ಮತ್ತು ಕೆ.ಶಾಂತಕುಮಾರಿ ದಂಪತಿ  ಕುಂಟಾರು ರವೀಶ ತಂತ್ರಿ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿಸಿದ ನಂತರ ಬೆಳ್ಳಿ ಕೊಡೆಯನ್ನು ‌ಸಮರ್ಪಣೆ ಮಾಡಿದರು. ನಂತರ ಮಾತನಾಡಿ, ದೇವಳದ ಒಂದು ಕಟ್ಟೆಯ ಪುನರ್ ನಿರ್ಮಾಣಕ್ಕೆ ₹ 25 ಲಕ್ಷ ದೇಣಿಗೆ ನೀಡುವುದಾಗಿ ತಿಳಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಕೇಶವ ಭಟ್ ದಂಪತಿಯನ್ನು ಗೌರವಿಸಿ, ಪ್ರಧಾನ ಅರ್ಚಕ ವಸಂತ ಕೆದಿಲಾಯ ದೇವರ ಪ್ರಸಾದ ನೀಡಿದರು. ಇನ್ನು ಶಿಲಾನ್ಯಾಸದ ವೇಳೆ ₹ 5 ಲಕ್ಷವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಈಶ್ವರ ಭಟ್, ವಿನಯ ಸುವರ್ಣ, ಪುತ್ತೂರು ನಗರಸಭೆಯ ನಿಕಟಪೂರ್ವ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್, ವಿನಯ ತಂತ್ರಿ, ಬೆಳ್ಳಿಯ ಛತ್ರಿ ನಿರ್ಮಾಣ ಮಾಡಿದ ಜನಾರ್ದನ ಆಚಾರ್ಯ ಕಾಟುಕುಕ್ಕೆ, ಪುತ್ತೂರು ಪರ್ಲಡ್ಕ ನಿವಾಸಿ ನಿರಂಜನ ಆಚಾರ್ಯ, ಕೇಶವ ದಂಪತಿಯ ಸಂಬಂಧಿಕ ರಾಧೇಶ್ಯಾಮ್ ಅಜೇಯನಗರ ಇದ್ದರು.

Donation of ₹7 lakh silver umbrella to Mahalingeshwara temple in Puttur- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 163

You cannot copy content of this page